“ಅಮರಾವತಿ ಪೋಲಿಸ್ ಸ್ಟೇಷನ್” ಟೀಸರ್ ಬಿಡುಗಡೆ

Date:

  • “ಅಮರಾವತಿ ಪೋಲಿಸ್ ಸ್ಟೇಷನ್” ಟೀಸರ್ ಬಿಡುಗಡೆ
  • ಕಡಲ ತೀರದ ಕಾಲ್ಪನಿಕ ಊರು ಅಮರಾವತಿಯಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸಸ್ಪೆನ್ಸ್, ಥ್ರಿಲ್ಲರ್ ಮೂವಿ
  • ಧರ್ಮ ಕೀರ್ತಿರಾಜ್ ನಾಯಕನಾಗಿ, ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಚಿತ್ರ

ಪಿ. ಪಿ. ಪವರ್ ಪಿಕ್ಚರ್ಸ್ ಲಾಛನದಲ್ಲಿ ಕೆ.ಆರ್.ಪ್ರದೀಪ್ ಕಮಲಪುರ ನಿರ್ಮಿಸಿರುವ ಹಾಗೂ ಶ್ರೀಮತಿ ಗೀತಾ ಅಂಜನರೆಡ್ಡಿ ಅವರ ಸಹ ನಿರ್ಮಾಣವಿರುವ “ಅಮರಾವತಿ ಪೋಲಿಸ್ ಸ್ಟೇಷನ್” Amaravathi Police Station Movie ಚಿತ್ರ ಅಮರಾವತಿ ಎಂಬ ಕಡಲ ತೀರದ ಕಾಲ್ಪನಿಕ ಊರಿನಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ಸುತ್ತುವ ಸಸ್ಪೆನ್ಸ್, ಥ್ರಿಲ್ಲರ್ ಮೂವಿ. ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದ ಶೇ.೯೦ ಭಾಗದ ಚಿತ್ರೀಕರಣ ಮುಗಿದಿದೆ. ಕ್ಲೈಮ್ಯಾಕ್ಸ್ ಹಾಗೂ ಹಾಡೊಂದರ ಶೂಟಿಂಗ್ ಬಾಕಿಯಿದ್ದು, ಮಾರ್ಚ್ 17 ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ದಿನ ಚಿತ್ರದ ಲವ್ ಟ್ರ್ಯಾಕೊಂದನ್ನು ಬಿಡುಗಡೆ ಮಾಡುವ ಪ್ಲಾನ್ ನಿರ್ದೇಶಕ ಪುನೀತ್ ಅರಸೀಕೆರೆ ಅವರದ್ದು.

ಮಿಸ್ಸಿಂಗ್, ಸಸ್ಪೆನ್ಸ್ ಥ್ರಿಲ್ಲರ್ ಮೂವಿ

ಇದ್ದಕ್ಕಿದ್ದ ಹಾಗೆ ಕಾಣೆಯಾಗುವ ಊರಿನ ಗೌಡ, ಆತನನ್ನು ಪತ್ತೆಹಚ್ಚಲು ಬಂದ ಪೋಲೀಸ್ ಕೂಡ ಕಾಣೆಯಾಗುತ್ತಾನೆ. ಇದೆಲ್ಲದರ ಹಿಂದೆ ಇರುವ ಮರ್ಮ ಏನೆಂಬುದನ್ನು ಹೇಳುವ ಚಿತ್ರವೇ ಅಮರಾವತಿ ಪೊಲೀಸ್ ಸ್ಟೇಷನ್. ಒಂದಷ್ಟು ನಾಗಾಸಾಧುಗಳ ಕಂಟೆಂಟ್ ಕೂಡ ಚಿತ್ರದಲ್ಲಿದೆ. ಮಾರ್ಚ್ ಎಂಡ್ ಅಥವಾ ಏಪ್ರಿಲ್ ವೇಳೆಗೆ ಸಿನಿಮಾ ರಿಲೀಸ್ ಮಾಡುವ ಯೋಚನೆ ಚಿತ್ರತಂಡಕ್ಕಿದೆ.

ಮುಖ್ಯಭೂಮಿಕೆಯಲ್ಲಿರುವ ನಟಪ್ರಮುಖರು

ಯುವನಟ ಧರ್ಮ ಕೀರ್ತಿರಾಜ್ Dharma Keerthira ಈ ಚಿತ್ರದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಗುರುರಾಜ್ ಜಗ್ಗೇಶ್ ಕೂಡಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೇದ್ವಿಕ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಹಿರಿಯನಟಿ ಭವ್ಯ, ಧರ್ಮ, ಸಾಧು ಕೋಕಿಲ, ಕಾಕ್ರೋಚ್ ಸುಧಿ ನಾಗೇಂದ್ರ ಪ್ರಸಾದ್, ಧರ್ಮಣ್ಣ ಕಡೂರು ತಾರಾಗಣದಲ್ಲಿದ್ದಾರೆ. ರೋಣದ ಬಕ್ಕೇಶ್ ಸಂಗೀತ ಸಂಯೋಜನೆ, ಗೌತಮ್ ಮಟ್ಟಿ ಛಾಯಾಗ್ರಹಣ, ಡಿಫರೆಂಟ್ ಡ್ಯಾನಿ, ಅಲ್ಟಿಮೇಟ್ ಶಿವು ಅವರ ಸಾಹಸ ನಿರ್ದೇಶನ, ವೆಂಕಿ ಯುವಿಡಿ ಅವರ ಸಂಕಲನ, ಆರ್ಯ ಶಿವು ಕರಗುಂದ ಅವರ ಸಂಭಾಷಣೆ ಚಿತ್ರಕ್ಕಿದೆ.

Amaravathi Police Station Teaser 

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ತೆರೆಯ ಮೇಲೆ ಮಿಂಚಲಿದೆ ತಂದೆ ಮಕ್ಕಳ ಬಾಂಧವ್ಯದ ಕಹಾನಿ: ಬರ್ತಿದೆ ಬಹುನಿರೀಕ್ಷಿತ ಚಿತ್ರಗಳು!

ತಂದೆ ಮಕ್ಕಳ ಬಾಂಧವ್ಯವನ್ನು ಸಾರುವ ಬಹಳಷ್ಟು ಸಿನಿಮಾಗಳು ಕನ್ನಡ ಚಿತ್ರರಂಗದಲ್ಲಿ ಬಂದು...

ಜೂನ್ 20 ರಂದು ರಾಯಲ್ ಆಗಿ ತೆರೆಗಪ್ಪಳಿಸಲಿದೆ “ಕುಬೇರ”

ಜೂನ್ 20 ರಂದು ರಾಯಲ್ ಆಗಿ ತೆರೆಗಪ್ಪಳಿಸಲಿದೆ “ಕುಬೇರ” ದುಡ್ಡೇ ದೊಡ್ಡಪ್ಪ, ನ್ಯಾಯ...

ಸಖತ್ ಟ್ರೆಂಡಿಂಗ್ ನಲ್ಲಿದೆ “ಎಲ್ಟು ಮುತ್ತಾ” ಟೀಸರ್

ಸಖತ್ ಟ್ರೆಂಡಿಂಗ್ ನಲ್ಲಿದೆ “ಎಲ್ಟು ಮುತ್ತಾ” ಟೀಸರ್ ಕೊಡಗಿನ ಸ್ವಾದವಿರುವ ವಿಭಿನ್ನ ಚಿತ್ರವಿದು ರಾ.ಸೂರ್ಯ...

ಪ್ರೇಮದ ಕಡಲಲ್ಲಿ “ದೂರ ತೀರ ಯಾನ” : ಕಿವಿ ತಂಪಾಗಿಸ್ತಿದೆ ಶೀರ್ಷಿಕೆ ಗೀತೆ

ಪ್ರೇಮದ ಕಡಲಲ್ಲಿ “ದೂರ ತೀರ ಯಾನ” : ಕಿವಿ ತಂಪಾಗಿಸ್ತಿದೆ ಶೀರ್ಷಿಕೆ...