ಸಂಗಮೇಶ್ವರ ಚಿತ್ರಕ್ಕೆ ಅತ್ಯುತ್ತಮ “ಭಕ್ತಿ ಗೀತೆ” ಪ್ರಶಸ್ತಿ

Date:

  • ಸಂಗಮೇಶ್ವರ ಚಿತ್ರಕ್ಕೆ ಅತ್ಯುತ್ತಮ “ಭಕ್ತಿ ಗೀತೆ” ಪ್ರಶಸ್ತಿ
  • ನಟ ವಿಶ್ವಪ್ರಕಾಶ ಮಲಗೊಂಡಗೆ ಪ್ರಶಸ್ತಿ

ಬೆಂಗಳೂರು : ಸಿದ್ದಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಹುನಗುಂದ ಶಾಸಕ ಡಾ. ವಿಜಯಾನಂದ ಕಾಶಪ್ಪನವರ ಹಾಗೂ ಕೆಪಿಸಿಸಿ ರಾಜ್ಯ ಪ್ರದಾನ ಕಾರ್ಯದರ್ಶಿ, ಬಾಗಲಕೋಟ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಅವರು ವಿಜಯಪುರದ ನಟ ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಪ್ರಶಸ್ತಿ ಹಾಗೂ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಿ ಗೌರವಿಸಿದರು.

ಜ.15/2025 ಬುಧವಾರ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸಿದ್ದನಕೊಳ್ಳದಲ್ಲಿ ಜರುಗಿದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಶ್ವಪ್ರಕಾಶ Vishwaprakash ನಟನೆಯ, ಮಾಧವಾನಂದ ಶೇಗುಣಶಿ ನಿರ್ಮಾಣದ, ರಾಜಾ ರವಿಶಂಕರ ನಿರ್ದೇಶನದ ಸಂಗಮೇಶ್ವರ ಮಹಾರಾಜರು ಭಕ್ತಿ ಪ್ರದಾನ ಚಿತ್ರದ ಹಾಡು ಭಾಗವಹಿಸಿತ್ತು. ನಂತರ ಅತ್ತುತ್ಯಮ ಭಕ್ತಿ ಗೀತೆ ಎಂದು ಪ್ರಶಸ್ತಿ ಹಾಗೂ ಪ್ರಶಂಸನಾ ಪತ್ರ ನೀಡಿದರು.

ಚಲನಚಿತ್ರೋತ್ಸವದಲ್ಲಿ ಡಾ.ಶಿವಕುಮಾರ ಮಹಾಸ್ವಾಮಿಗಳು, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ದೇಶಕ ಕಿನ್ನಾಳ ರಾಜ, ಹಾಸ್ಯ ಕಲಾವಿದ ಪ್ರಾಣೇಶ್ ಗಂಗಾವತಿ, ಮಾಸ್ಟರ್ ಆನಂದ, ಗಾಯಕ ಜಸ್ಕರಣ ಸಿಂಗ್, ಡಾ.ಆರ್ ಎಸ್ ರಾಜು, ಚಿತ್ರತಂಡದವರಾದ ಛಾಯಾಗ್ರಾಹಕ ರವಿ ಕುಂಟೋಜಿ, ಸಂಕಲನಕಾರ ಬಸವರಾಜ ಬಡಿಗೇರ, ಸಚಿನ ಶೆಟ್ಟಿ, ಸಿನಿಮಾ ಪ್ರಚಾರಕರ್ತ ಡಾ.ಪ್ರಭು ಗಂಜಿಹಾಳ, ಡಾ.ವಿರೇಶ ಹಂಡಗಿ, ಸೇರಿದಂತೆ ಇನ್ನಿತರರು ಇದ್ದರು. ಮಂಗಳೂರಿನ ದೀಕ್ಷಾ ಪೂಜಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಈ ವಾರ ಓಟಿಟಿಗೆ ಎಂಟ್ರಿ ಕೊಡುತ್ತಿದೆ ಎರಡು ಬಹುನಿರೀಕ್ಷಿತ ಸಿನಿಮಾಗಳು – Two of the Most Awaited Movies are Finally Entering OTT This Week

• ಮಳೆಗಾಲದಲ್ಲಿ ಮನೆಯಲ್ಲಿಯೇ ಬಿಂದಾಸ್ ಮನರಂಜನೆ• ಒಂದು ಆಕ್ಷನ್ ಇನ್ನೊಂದು ಅಪರೂಪದ...

ಓಟಿಟಿಯಲ್ಲಿ ಸದ್ದು ಮಾಡ್ತಿವೆ ಈ ಸೂಪರ್ ಹಿಟ್ ಚಿತ್ರಗಳು

ಜೂನ್ ಮಳೆಯೊಂದಿಗೆ ಆನಂದಿಸಬಹುದಾದ ಇಂಟರೆಸ್ಟಿಂಗ್ ಸಿನಿಮಾಗಳು ಆಕ್ಷನ್, ಕಾಮಿಡಿ, ಸಖತ್ ಥ್ರಿಲ್ಲರ್ ಮೂವಿಗಳದ್ದೇ...

ಅಭಿನಯದ ಮೂಲಕ ಅಮರ ನಟ, ನಿರ್ಮಾಪಕ ದಿಲೀಪ್ ರಾಜ್

ಅಭಿನಯದ ಮೂಲಕ ಅಮರ ನಟ, ನಿರ್ಮಾಪಕ ದಿಲೀಪ್ ರಾಜ್ ರಂಗಭೂಮಿಯಿಂದ ಕಲಾಯಾತ್ರೆ ಆರಂಭಿಸಿ...

ಸಿನಿಮಾ ಸಂಗೀತ ನಿರ್ದೇಶನಕ್ಕೆ ಹೊಸ “ಪ್ರಣವ” ರಾಗ

ಸಿನಿಮಾ ಸಂಗೀತ ನಿರ್ದೇಶನಕ್ಕೆ ಹೊಸ “ಪ್ರಣವ” ರಾಗ ಯುವ ಸಂಗೀತ ನಿರ್ದೇಶಕನ...