ವಿಭಿನ್ನ ಕತೆಯ ಎಳೆ ಹೊಂದಿರುವ “ರಾವುತ” ಜ.31 ರಂದು ತೆರೆಗೆ

Date:

  • ವಿಭಿನ್ನ ಕತೆಯ ಎಳೆ ಹೊಂದಿರುವ “ರಾವುತ” ಜ.31 ರಂದು ತೆರೆಗೆ
  • ಉತ್ತರ ಕರ್ನಾಟಕದ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಚಿತ್ರ
  • ಚಿತ್ರಕ್ಕೆ ನಟನೆಯ ಮೂಲಕ ಬಣ್ಣ ತುಂಬಿದ್ದಾರೆ ರಾಜ್ ಪ್ರವೀಣ್, ಭವಾನಿ ಪುರೋಹಿತ್

ಸಂಪೂರ್ಣ ಉತ್ತರ ಕರ್ನಾಟಕ Uttara Karnataka ಸೊಗಡಿನ, ಸಂಸ್ಕೃತಿಯ ದೃಶ್ಯ ಚಿತ್ರಣವನ್ನು ಹೊಂದಿರುವ, ವಿಭಿನ್ನ ಕಥಾ ಹಂದರವಿರುವ ಚಿತ್ರ “ರಾವುತ”. Ravutha Movie ವಿಶ್ವಕರ್ಮ ಸಿನಿಮಾಸ್ ನಿರ್ಮಾಣದ ಈ ಚಿತ್ರವು ಒಂದು ವಿಭಿನ್ನ ಪ್ರಯತ್ನವಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ಜನವರಿ 31 ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರ ಸಿದ್ದು ವಜ್ರಪ್ಪ ನಿರ್ದೇಶನದ ಮೊದಲ ಚಿತ್ರವಾಗಿದೆ.

ಸಾವಿನ ನಂತರದ ಕುತೂಹಲ ಭರಿತ ಕಥೆ

ಈ ಸಿನಿಮಾ, ಗಂಡುಗಲಿ ಕುಮಾರರಾಮ ಕಾಲದ ಸಾಮಾನ್ಯ ಜನರ ಮತ್ತು ಸಾಧಕರ ಕಥೆ ಒಳಗೊಂಡಿದೆ. ಆದರೆ ಎಲ್ಲಾ ಸಿನಿಮಾಗಳಂತೆ ಕೇವಲ ಸಾಹಸ, ಪ್ರೀತಿ, ದ್ವೇಷ ಮುಂತಾದ ಸಮಾನ್ಯ ಸಂಗತಿಗಳಿಗೆ ಜೋತುಬೀಳದೇ ವಿಶಿಷ್ಟ ಕಥಾಹಂದರ ಹೊಂದಿದೆ. ಸಾವಿನ ನಂತರ ಏನಾಗುತ್ತೆ ಅನ್ನೋದನ್ನ ಕಥೆಯ ಸಾರವಾಗಿಸಿದ್ದಾರೆ ಕಥೆಗಾರ, ನಿರ್ದೇಶಕ ಸಿದ್ದುವಜ್ರಪ್ಪ.ಇದರ ಕ್ಲೈಮ್ಯಾಕ್ಸ್ ಸಾವಿನ ನಂತರದ ಪಯಣ ತಿಳಿಸುತ್ತದೆ ಎಂದು ಹೇಳಿದ್ದಾರೆ ನಿರ್ಮಾಪಕರು. ಸಣ್ಣ ಪ್ರೀಮಿಯರ್ ಶೋ ನಡೆದಿದ್ದು, ಟ್ರೈಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಜಾಕ್ ಮಂಜು ಅವರ ಶಾಲಿನಿ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ಬಿಡುಗಡೆಗೊಳ್ಳುತ್ತಿದೆ. ನಾಯಕನಾಗಿ ರಾಜ್ ಪ್ರವೀಣ್, ನಾಯಕಿಯಾಗಿ ಭವಾನಿ ಪುರೋಹಿತ್ ಮಿಂಚಲಿದ್ದಾರೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ ಲಿಸ್ಟ್

ಗಣಪತಿ ಪೆಂಡಾಲ್‌ ನಲ್ಲಿ ಹಾಕಲು ಕನ್ನಡ ಸಿನಿಮಾ ಹಾಡುಗಳನ್ನು ಹುಡುಕ್ತಿದ್ದೀರಾ? ಇಲ್ಲಿದೆ...

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ ಕನ್ನಡ ಚಿತ್ರಗಳು – These new Kannada movies are available on OTT

ಈ ವೀಕೆಂಡ್ ಗೆ ಸಿನಿಮಾ ನೋಡೋ ಪ್ಲ್ಯಾನ್ ಇದೆಯಾ? ಒಟಿಟಿಯಲ್ಲಿವೆ ಈ...

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ – The Remarkable Journey of “Toxic”

ವಿವಾದದ ನಡುವೆ ಸದ್ದು ಮಾಡುತ್ತಿದೆ “ಟಾಕ್ಸಿಕ್”, ಗಮನ ಸೆಳೆಯುವಂತಿದೆ ಯಶಸ್ಸಿನ ಜರ್ನಿ ಸಾಮಾನ್ಯ...

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – How to submit your short film to a film festival

ನಿಮ್ಮ ಶಾರ್ಟ್‌ಫಿಲ್ಮ್‌ನ್ನು ಫಿಲ್ಮ್ ಫೆಸ್ಟಿವಲ್‌ಗೆ ಹೇಗೆ ಸಲ್ಲಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ...