ಮಫ್ತಿ ಸಿನಿಮಾದ ಪಾತ್ರವೊಂದರ ಹೆಸರನ್ನು ಇಟ್ಟುಕೊಂಡು ನಿರ್ದೇಶಕ ನರ್ತನ್ ‘ಭೈರತಿ ರಣಗಲ್’ ಹೆಸರಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ಮುಹೂರ್ತ ಕೂಡ ನೆಡೆದಿತ್ತು. ಇಂದಿನಿಂದ ಚಿತ್ರೀಕರಣ ಆರಂಭಿಸಿದ್ದಾರೆ ನರ್ತನ್. ಚಿತ್ರೀಕರಣದಲ್ಲಿ ಶಿವರಾಜ್ ಕುಮಾರ್ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ.
ಮಫ್ತಿ ಸಿನಿಮಾದಲ್ಲಿ ಶಿವರಾಜ್ ಕುಮಾರ್, ಭೈರತಿ ರಣಗಲ್ ಹೆಸರಿನ ಪಾತ್ರ ಮಾಡಿದ್ದರು. ಮಫ್ತಿ ಸಿನಿಮಾ ಹಿಟ್ ಕೂಡ ಆಗಿತ್ತು. ಇದೀಗ ಆ ಪಾತ್ರವನ್ನಿಟ್ಟುಕೊಂಡು ನರ್ತನ್ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಸ್ವತಃ ಶಿವರಾಜ್ ಕುಮಾರ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ಗೀತಾ ಪಿಕ್ಚರ್ಸ್ ಬ್ಯಾನರ್ ನಲ್ಲಿ ಈ ಸಿನಿಮಾ ತಯಾರಾಗುತ್ತಿದೆ.
ಈ ನಡುವೆ ಶಿವರಾಜ್ ಕುಮಾರ್ ಮತ್ತು ರಜನಿಕಾಂತ್ ಕಾಂಬಿನೇಷನ್ ನ ಜೈಲರ್ ಸಿನಿಮಾ ರಿಲೀಸ್ ಆಗುತ್ತಿದ್ದು, ದಕ್ಷಿಣದ ಹೆಸರಾಂತ ಸ್ಟಾರ್ ನಟರೇ ಈ ಸಿನಿಮಾದಲ್ಲಿ ಇದ್ದಾರೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಒಟ್ಟು ಹತ್ತು ನಿಮಿಷಗಳ ಕಾಲ ತೆರೆಯ ಮೇಲೆ ಕಾಣಲಿದ್ದಾರಂತೆ. ಹತ್ತು ನಿಮಿಷವಿದ್ದರೂ ಕಥೆಗೆ ಮತ್ತೊಂದು ತೂಕವನ್ನು ಕೊಡುವಂತ ಪಾತ್ರ ಅದಾಗಿದೆಯಂತೆ. ಅಷ್ಟರ ಮಟ್ಟಿಗೆ ಪಾತ್ರ ಪವರ್ ಫುಲ್ ಆಗಿದೆ ಎನ್ನುವುದು ಶಿವಣ್ಣ ಮಾತು.
ಜೈಲರ್’ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್ ದಿಗ್ಗಜರು ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.