ಮಹಾಗುರು ಹಂಸಲೇಖರಿಂದ ಬಂಗಾರದ ಪದಕ ಪಡೆದ ತೀರ್ಥಹಳ್ಳಿ ಗಾಯಕಿ ಶ್ರದ್ಧಾ!

Date:

ಮಹಾಗುರು ಹಂಸಲೇಖರಿಂದ ಬಂಗಾರದ ಪದಕ ಪಡೆದ ತೀರ್ಥಹಳ್ಳಿ ಗಾಯಕಿ ಶ್ರದ್ಧಾ!
ರಾಜ್ಯ ಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ತೀರ್ಥಹಳ್ಳಿಯ ಹೆಮ್ಮೆಯ ಗಾಯಕಿ ಕಟ್ಟೆಹಕ್ಕಲು ಸುಧಾಕರ್ ಹಾಗೂ ಶಮಂತ ದಂಪತಿಯ ಪುತ್ರಿ ಶ್ರದ್ಧಾ ರವರು ನಾದಬ್ರಹ್ಮ ಡಾ. ಹಂಸಲೇಖ ರವರ ಸ್ಟುಡಿಯೋದಲ್ಲಿ ನಡೆದ ರಾಜ್ಯಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಮಹಾಗುರು ಹಂಸಲೇಖರವರಿಂದ ಬಂಗಾರದ ಪದಕವನ್ನು ಪಡೆದುಕೊಂಡಿದ್ದಾರೆ.

ಶ್ರದ್ಧಾ ರವರು ಪ್ರಸ್ತುತ ತೀರ್ಥಹಳ್ಳಿಯ ಸಹ್ಯಾದ್ರಿ ಸಂಸ್ಥೆಯಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದು, ಭಾರತದ ಶ್ರೇಷ್ಠ ಗಾಯಕರಲ್ಲಿ ಒಬ್ಬರಾದ ಡಾ. ಎಸ್ ಪಿ ಬಾಲಸುಬ್ರಮಣ್ಯಂ ರವರ ಜೊತೆ ವೇದಿಕೆಯಲ್ಲಿ ಹಾಡಿದ್ದಾರೆ. ಹಾಗೂ ಇವರು ತನ್ನ ಅತಿ ಚಿಕ್ಕ ವಯಸ್ಸಿನಲ್ಲಿ ಚಂದನ ಟಿವಿ ಸೇರಿದಂತೆ ಕನ್ನಡದ ಹಲವು ವಾಹಿನಿಯಲ್ಲಿ ಕಾರ್ಯಕ್ರಮ ನೀಡಿದ್ದು, ತನ್ನ ಹತ್ತನೇ ವಯಸ್ಸಿನಲ್ಲಿ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಉದಯ ಸಿಂಗರ್ಸ್ ಜೂನಿಯರ್ಸ್ ಎಂಬ ಕಾರ್ಯಕ್ರಮದಲ್ಲಿ ಫಿನಾಲೆಯವರೆಗೂ ತಲುಪಿ ಮೆಚ್ಚುಗೆ ಪಡೆದುಕೊಂಡಿದ್ದಾರೆ.

ತೀರ್ಥಹಳ್ಳಿಯ ಗಾಯಕಿ ಶ್ರದ್ಧಾ ರವರ ಸಾಧನೆಗೆ ಸ್ಥಳೀಯರು ಶುಭ ಹಾರೈಸಿದ್ದು, ಇವರು ಇನ್ನೂ ಹೆಚ್ಚಿನ ಸಂಗೀತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಾಲೂಕಿಗೆ ಹೆಮ್ಮೆತರಲಿ ಎಂಬುದು ನಮ್ಮೆಲ್ಲರ ಹಾರೈಕೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಈ ವಾರ ಓಟಿಟಿಗೆ ಎಂಟ್ರಿ ಕೊಡುತ್ತಿದೆ ಎರಡು ಬಹುನಿರೀಕ್ಷಿತ ಸಿನಿಮಾಗಳು – Two of the Most Awaited Movies are Finally Entering OTT This Week

• ಮಳೆಗಾಲದಲ್ಲಿ ಮನೆಯಲ್ಲಿಯೇ ಬಿಂದಾಸ್ ಮನರಂಜನೆ• ಒಂದು ಆಕ್ಷನ್ ಇನ್ನೊಂದು ಅಪರೂಪದ...

ಓಟಿಟಿಯಲ್ಲಿ ಸದ್ದು ಮಾಡ್ತಿವೆ ಈ ಸೂಪರ್ ಹಿಟ್ ಚಿತ್ರಗಳು

ಜೂನ್ ಮಳೆಯೊಂದಿಗೆ ಆನಂದಿಸಬಹುದಾದ ಇಂಟರೆಸ್ಟಿಂಗ್ ಸಿನಿಮಾಗಳು ಆಕ್ಷನ್, ಕಾಮಿಡಿ, ಸಖತ್ ಥ್ರಿಲ್ಲರ್ ಮೂವಿಗಳದ್ದೇ...

ಅಭಿನಯದ ಮೂಲಕ ಅಮರ ನಟ, ನಿರ್ಮಾಪಕ ದಿಲೀಪ್ ರಾಜ್

ಅಭಿನಯದ ಮೂಲಕ ಅಮರ ನಟ, ನಿರ್ಮಾಪಕ ದಿಲೀಪ್ ರಾಜ್ ರಂಗಭೂಮಿಯಿಂದ ಕಲಾಯಾತ್ರೆ ಆರಂಭಿಸಿ...

ಸಿನಿಮಾ ಸಂಗೀತ ನಿರ್ದೇಶನಕ್ಕೆ ಹೊಸ “ಪ್ರಣವ” ರಾಗ

ಸಿನಿಮಾ ಸಂಗೀತ ನಿರ್ದೇಶನಕ್ಕೆ ಹೊಸ “ಪ್ರಣವ” ರಾಗ ಯುವ ಸಂಗೀತ ನಿರ್ದೇಶಕನ...